ನನ್ನ ಮೆಚ್ಚಿನ ವಚನಗಳು
ನನ್ನ ಮೆಚ್ಚಿನ ಕೆಲವು ವಚನಗಳು.
ಅಲ್ಲಮ ಪ್ರಭುಗಳ ವಚನ
ಹೊನ್ನು ಮಾಯೆ ಎಂಬರು ಹೊನ್ನು ಮಾಯೆಯಲ್ಲ
ಹೆಣ್ಣು ಮಾಯೆ ಎಂಬರು ಹೆಣ್ಣು ಮಾಯೆಯಲ್ಲ
ಮಣ್ಣು ಮಾಯೆ ಎಂಬರು ಮಣ್ಣು ಮಾಯೆಯಲ್ಲ
ಮನದ ಮುಂದಣ ಆಸೆಯೇ ಮಾಯೆ ಕಾಣಾ ಗುಹೇಶ್ವರ
ಹೆಣ್ಣು ಮಾಯೆ ಎಂಬರು ಹೆಣ್ಣು ಮಾಯೆಯಲ್ಲ
ಮಣ್ಣು ಮಾಯೆ ಎಂಬರು ಮಣ್ಣು ಮಾಯೆಯಲ್ಲ
ಮನದ ಮುಂದಣ ಆಸೆಯೇ ಮಾಯೆ ಕಾಣಾ ಗುಹೇಶ್ವರ
ಬಸವಣ್ಣನವರ ವಚನ
ಕಳಬೇಡ ಕೊಲಬೇಡ
ಹುಸಿಯನುಡಿಯಲು ಬೇಡ
ಮುನಿಯಬೇಡ
ಅನ್ಯರಿಗೆ ಅಸಹ್ಯ ಪಡಬೇಡ
ತನ್ನ ಬಣ್ಣಿಸಬೇಡ
ಇದಿರ ಹಳಿಯಲುಬೇಡ
ಇದೇ ಅಂತರಂಗ ಶುದ್ದಿ
ಇದೇ ಬಹಿರಂಗ ಶುದ್ದಿ
ಇದೇ ನಮ್ಮ ಕೂಡಲಸಂಗಮನೊಲಿಸುವ ಪರಿ
ಲೋಕದ ಡೊಂಕ ನೀವೇಕೆ ತಿದ್ದುವಿರಿ
ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ
ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ
ನೆರೆಮನೆಯ ದುಃಖಕ್ಕೆ ಅಳುವವರ ಮೆಚ್ಚ
ನಮ್ಮ ಕೂಡಲಸಂಗಮದೇವಾ.
ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ
ನೆರೆಮನೆಯ ದುಃಖಕ್ಕೆ ಅಳುವವರ ಮೆಚ್ಚ
ನಮ್ಮ ಕೂಡಲಸಂಗಮದೇವಾ.
ಆಕ್ಕ ಮಹಾದೇವಿಯ ವಚನ
ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯ ನೀನು
ಮನಕರಗದವರಲ್ಲಿ ಪುಷ್ಪವನೊಲ್ಲೆಯಯ್ಯ ನೀನು
ಹದುಳಿಗರಲ್ಲದವರಲ್ಲಿ ಗಂದಾಕ್ಷತೆಯನೊಲ್ಲೆಯಯ್ಯ ನೀನು
ಅರಿವು ಕಣ್ತೆರೆಯದವರಲ್ಲಿ ಆರತಿಯನೊಲ್ಲೆಯಯ್ಯ ನೀನು
ಭಾವಶುದ್ಧವಿಲ್ಲದವರಲಿ ಧೂಪವನೊಲ್ಲೆಯಯ್ಯ ನೀನು
ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲೆಯಯ್ಯ ನೀನು
ತ್ರಿಕರಣಶುದ್ಧವಿಲ್ಲದವರಲಿ ತಾಂಬೂಲವನೊಲ್ಲೆಯಯ್ಯ ನೀನು
ಹೃದಯಕಮಲ ಅರಳದವರಲಿ ಇರಲೊಲ್ಲೆಯಯ್ಯ ನೀನು
ಎನ್ನಲ್ಲಿ ಏನುಂಟೆಂದು ಕರಸ್ಥಲವನಿಂಬುಗೊಂಡೆ ಹೇಳಾ
ಚೆನ್ನಮಲ್ಲಿಕಾರ್ಜುನಯ್ಯ.
Categories: ಬದುಕು
ಅಲ್ಲಮ ಪ್ರಭು, ಆಕ್ಕ ಮಹಾದೇವಿಯ, ಬಸವಣ್ಣನವರ, ವಚನಗಳು